ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಅಡಿಗಲ್ಲು ಹಾಕಿದ ದಿನವನ್ನೇ ಕಾಂಗ್ರೆಸ್ ಪಕ್ಷ ತನ್ನ ಪ್ರತಿಭಟನೆ ಆಯ್ಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಅವರು ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020 ರ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಕಾಂಗ್ರೆಸ್ ನಾಯಕರು ಇದೇ ದಿನವನ್ನು ಆಯ್ಕೆ ಮಾಡಿಕೊಂಡು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ತಮ್ಮ ತುಷ್ಠೀಕರಣ ರಾಜಕಾರಣವನ್ನು ಮತ್ತಷ್ಟು ಉತ್ತೇಜಿಸುವ ಸಂದೇಶವನ್ನು ನೀಡಿದ್ದಾರೆ. ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕರಿಗೆ ಯಾವುದೇ ಹೊಸ ಸಮನ್ಸ್ ನೀಡಿಲ್ಲ. ಅದರ ಹೊರತಾಗಿಯೂ ಅವರು ಇಂದು ಪ್ರತಿಭಟನೆ ನಡೆಸಿದ್ದಾರೆ. ಎಲ್ಲರೂ ಕಾನೂನಿಗೆ ಗೌರವ ನೀಡಬೇಕು’ ಎಂದು ತಿಳಿಸಿದ್ದಾರೆ.
#WATCH | Congress chose this day for protest and wore black clothes because they want to give a subtle message to further promote their appeasement politics because on this day itself Prime Minister Modi laid the foundation of Ram Janambhoomi: Union Home minister Amit Shah pic.twitter.com/hopwRSPZht
— ANI (@ANI) August 5, 2022
ಇಂದು ಕಾಂಗ್ರೆಸ್ ನಾಯಕರು ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ, ಜಿಎಸ್ ಟಿ ಏರಿಕೆ ಮತ್ತು ನಿರುದ್ಯೋಗ ಹೆಚ್ಚಳದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತು. ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವದ ಸಾವಿಗೆ ನಾವು ಸಾಕ್ಷಿಯಾಗುತ್ತಿದ್ದೇವೆ, ಸರ್ವಾಧಿಕಾರಿ ವೈಖರಿಯ ಆಡಳಿತದ ವಿರುದ್ಧ ಧ್ವನಿಯೆತ್ತಿದರೆ ಅವರ ವಿರುದ್ಧ ದಾಳಿ ನಡೆಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದರು.
Congress chose 'Ram Janambhoomi' foundation day for protest in black clothes to promote appeasement politics: Amit Shah
Read @ANI Story | https://t.co/RCDAnZsbff#AmitShah #CongressProtest #RamMandir #ayodhyarammandir pic.twitter.com/hhCn6inkqa
— ANI Digital (@ani_digital) August 5, 2022