ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಮತ್ತೆ ಮೂರು ತಿಂಗಳ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿದೆ.
BBMPಯ 243 ವಾರ್ಡ್ಗಳಿಗೆ ನವೆಂಬರ್ 30 ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ 2022ರ ಡಿ.31 ರೊಳಗೆ ಚುನಾವಣೆ ನಡೆಸಬೇಕು ಎಂದು ಸೆ.30ರಂದು ಹೈಕೋರ್ಟ್ ಏಕಸದಸ್ಯಪೀಠ ಆದೇಶ ನೀಡಿತ್ತು. ಆದರೆ ಈ ಆದೇಶಕ್ಕೆ ನಗರಾಭಿವೃದ್ಧಿ ಇಲಾಖೆಯು ಪಾಲನೆಗೆ ಮತ್ತೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕಳೆದ ವಾರ ಪ್ರಮಾಣಪತ್ರ ಸಲ್ಲಿಸಿತ್ತು, ಈ ಬಗ್ಗೆ ಮಂಗಳವಾರ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ. ಎನ್ ಘಣೀಂದ್ರ ಹಾಜರಾಗಿ ಚುನಾವಣೆ ನಡೆಸಲು ನಿದೇರ್ಶನ ಕೋರಿ ಸುಪ್ರೀಂ ಕೋರ್ಟ್ನಲ್ಲೂ ಅರ್ಜಿ ಸಲ್ಲಿಸಲಾಗಿದೆ. ಹಾಗೆಯೇ ಚುನಾವಣೆ ನಡೆಸಲು ಕಾಲಾವಕಾಶ ಕೋರಿರುವ ಸರ್ಕಾರದ ಅರ್ಜಿ ಕುರಿತು ಮಾಹಿತಿ ನೀಡಿ ಆಯೋಗವು ಸುಪ್ರೀಂ ಕೋರ್ಟ್ ಗೆ ಮೆಮೊ ಸಲ್ಲಿಸಿದೆ. ಅರ್ಜಿಯು ಡಿಸೆಂಬರ್ 9ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಗೆ ಬರುವ ಸಾಧ್ಯತೆ ಎಂದು ನ್ಯಾಯ ಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್ ವಿಚಾರಣೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ತಿಳಿಸಿ ಡಿಸೆಂಬರ್ 14ಕ್ಕೆ ಮುಂದೂಡಿದೆ.
ಇದನ್ನೂ ಓದಿ : ವೋಟರ್ ಲಿಸ್ಟ್ ಕರ್ತವ್ಯದಲ್ಲಿರೋ ಅಧಿಕಾರಿಗಳ ವರ್ಗಾವಣೆಗೆ ಕಂದಾಯ ಇಲಾಖೆಯಿಂದ ಬ್ರೇಕ್…!