ಚಿತ್ರದುರ್ಗ: ಸಿದ್ದರಾಮಯ್ಯ ಇಡೀ ದೇಶಕ್ಕೆ ಸಾಲ ಕೊಟ್ಟ ಕುಬೇರ, ಅವರು ಸಾಲ ಮಾಡದೆ ಇಷ್ಟು ವರ್ಷ ಆಡಳಿತ ನಡೆಸಿದ್ದಾರೆ. ಸಿದ್ಧರಾಮಯ್ಯ ಅವಧಿ ವಿಜಯನಗರ ಸಾಮ್ರಾಜ್ಯದಂತಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಭಾಗವಧ್ವಜ ಮುಂದೊಂದು ದಿನ ರಾಷ್ಟ್ರಧ್ವಜ ಆಗಲಿದೆ ಎಂದು ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಿದ್ದರು. ಚಿತ್ರದುರ್ಗದಲ್ಲಿ ಮಾತನಾಡಿದ ಈಶ್ವರಪ್ಪ ಅವರು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಸದನದಲ್ಲೇ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಉತ್ತರಿಸುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಕೋರ್ಟ್ ಆದೇಶ ಮೀರಿ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲೆಗೆ ಬಂದಿದ್ದಾರೆ. ಭವಿಷ್ಯ ಹಾಳುಮಾಡಿಕೊಳ್ಳಬೇಡಿ, ಸಮವಸ್ತ್ರ ಧರಿಸಿ ಎಂದು ಈಶ್ವರಪ್ಪ ಮನವಿ ಮಾಡಿದ್ದು, ಡಿಕೆಶಿ, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರೂ ವಿದ್ಯಾರ್ಥಿಗಳಿಗೆ ಹೀಗೆಯೇ ಮನವಿ ಮಾಡಬೇಕು ಎಂದು ತಿಳಿಸಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಹಿಂದು, ಮುಸ್ಲಿಂ ಸಮುದಾಯದ ನಡುವೆ ಗ್ಯಾಪ್ ಹೆಚ್ಚಳವಾಗುತ್ತೆ. ಇದೇ ದೇಶದಲ್ಲಿ ಹಿಂದುಗಳು ಮತ್ತು ಮುಸ್ಲಿಮರು ಹುಟ್ಟಿ ಬೆಳೆದಿದ್ದೇವೆ. ಒಟ್ಟಾಗಿ ಹೋಗದಿದ್ದರೆ ತುಂಬಾ ಕಷ್ಟ ಆಗಲಿದೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಕಾಂಗ್ರೆಸ್ ರಾಜಕಾರಣಕ್ಕ ಬಳಸಿಕೊಳ್ಳುತ್ತಿರುವುದು ಒಳ್ಳೆಯದಲ್ಲ. ಹೆಚ್.ಸಿ.ಮಹಾದೇವಪ್ಪ, ಡಿಕೆಶಿ, ಸಿದ್ಧರಾಮಯ್ಯ ಕೋರ್ಟಿನ ಮಾತು ಕೇಳುತ್ತಾರೋ ಇಲ್ಲವೋ ಅಷ್ಟು ಹೇಳಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಗೆಲ್ಲುವತ್ತ ಬಿಜೆಪಿ ಚಿತ್ತ… ಸಿಎಂಗೆ ಹಲವು ಬೇಡಿಕೆಗಳನ್ನು ಸಲ್ಲಿಸಿದ ಬೆಂಗಳೂರು ಬಿಜೆಪಿ ಶಾಸಕರು…
ಸಿದ್ಧರಾಮಯ್ಯ ಬಜೆಟ್ ಮಂಡಿಸಿದಾಗ ಸಾಲ ಮಾಡಿಲ್ಲ. ಸಿದ್ದರಾಮಯ್ಯ ಇಡೀ ದೇಶಕ್ಕೆ ಸಾಲ ಕೊಟ್ಟ ಕುಬೇರ, ಅವರು ಸಾಲ ಮಾಡದೆ ಇಷ್ಟು ವರ್ಷ ಆಡಳಿತ ನಡೆಸಿದ್ದಾರೆ. ಸಿದ್ಧರಾಮಯ್ಯ ಅವಧಿ ವಿಜಯನಗರ ಸಾಮ್ರಾಜ್ಯದಂತಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.