ಬೆಂಗಳೂರು: 6 ತಿಂಗಳ ಬಳಿಕ ವಿಶ್ವಪ್ರಸಿದ್ಧ ಕೇದಾರನಾಥ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು ಭಕ್ತಾದಿಗಳು ಕೇದಾರನಾಥನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಈಗ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೇದಾರನಾಥನ ದರ್ಶನ ಪಡೆದಿದ್ದು, ಕೇದಾರನಾಥಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೇದಾರನಾಥ ಯಾತ್ರೆಯ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, ‘ಕೈಲಾಸ ಪರ್ವತದ ನಂತರ ಕೇದಾರನಾಥವನ್ನು ಶಿವನ ಎರಡನೇ ವಾಸಸ್ಥಾನವೆಂದು ಕರೆಯಲ್ಪಡುವ ಉತ್ತರಾಖಂಡ ರಾಜ್ಯದ ಶ್ರೀ ಕೇದಾರನಾಥ್ ಸ್ವಾಮಿಯ ದರ್ಶನ, ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ. ನೈಸರ್ಗಿಕವಾಗಿಯೇ ಅಲೌಕಿಕ ದೃಶ್ಯಗಳಿಂದ ಕೂಡಿರುವ ಈ ದೇವಾಲಯ ಪವಾಡಗಳು ಹಾಗೂ ಅನೇಕ ಪೌರಾಣಿಕ ಕಥೆಗಳನ್ನು ಒಳಗೊಂಡಿರುವುದು ವಿಶೇಷ.’ ಎಂದು ಬರೆದುಕೊಂಡಿದ್ದಾರೆ.