ತುಮಕೂರು : ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಪುರಾತನ ಆಂಜನೇಯ ದೇವಾಲಯದ ಗರ್ಭಗುಡಿಯನ್ನೇ ಅಗೆದಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಗುಮ್ಮನಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ನಡೆದಿದೆ.
ಪುರಾತನ ಕಾಲದ ಆಂಜನೇಯ ದೇವಾಲಯ ಶಿರಾ ದೊಡ್ಡಕೆರೆಗೆ ನೀರು ಹರಿಯುವ ಹಳ್ಳದ ದಂಡೆಯಲ್ಲಿದ್ದು, ಹಲವು ವರ್ಷಗಳಿಂದ ಪೂಜಾ ಕೈಂಕರ್ಯ ನಡೆಯದ ಕಾರಣ ದೇವಾಲಯ ಗಿಡಗಂಟಿಗಳಿಂದ ಮುಚ್ಚಿ ಹೋಗಿತ್ತು. ಇವತ್ತು ಬೆಳಗ್ಗೆ ಕೆಲ ಯುವಕರು ದೇವಾಲಯದ ಬಳಿ ಹೋದಾಗ ಗರ್ಭಗುಡಿ ಮತ್ತು ಒಳ ಆವರಣದಲ್ಲಿ ಹತ್ತಾರು ಅಡಿ ಅಗೆದಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನಿಧಿ ಆಸೆಗಾಗಿ ಕಳ್ಳರು ದೇವಾಲಯದ ಗರ್ಭಗುಡಿ ಅಗೆದಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ತುಮಕೂರಿನ ಬಿಜೆಪಿ ಮೋರ್ಚಾದಲ್ಲಿ ಮಹಿಳಾ ಮಣಿಗಳ ಭರ್ಜರಿ ಡ್ಯಾನ್ಸ್.. ಟಪಾಂಗುಚ್ಚಿ ಸಖತ್ ವೈರಲ್ …