ಬೆಂಗಳೂರು: ಪ್ರಧಾನಿ ಮೋದಿಗಾಗಿ ನಿರ್ಮಿಸಿದ್ದ ರಸ್ತೆ ಒಂದೇ ದಿನದಲ್ಲಿ ಕುಸಿದಿದ್ದು, ರಸ್ತೆ ಕಾಮಗಾರಿ ನಿರ್ವಹಿಸಿದ್ದ ಬಿಬಿಎಂಪಿಯ ಮೂವರು ಎಂಜಿನಿಯರ್ಗಳಿಗೂ ಬಿಬಿಎಂಪಿ ಶೋಕಾಸ್ ನೋಟಿಸ್ ಕೊಟ್ಟಿದೆ.
ಆರ್.ಆರ್.ನಗರ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಂ.ಟಿ.ಬಾಲಾಜಿ, ಆರ್.ಆರ್.ನಗರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಹೆಚ್.ಜೆ.ರವಿ, ಆರ್.ಆರ್.ನಗರ ಅಸಿಸ್ಟೆಂಟ್ ಎಂಜಿನಿಯರ್ ಐ.ಕೆ.ವಿಶ್ವಾಸ್ಗೆ ನೋಟಿಸ್ ನೀಡಲಾಗಿದೆ.
ಮರಿಯಪ್ಪನ ಪಾಳ್ಯದ ಮುಖ್ಯರಸ್ತೆಯಲ್ಲಿ ರಿಪೇರಿ ಮಾಡಲಾಗಿತ್ತು. ಪ್ರಧಾನಿ ಬಂದು ಹೋದ ಮಾರನೇ ದಿನವೇ ರಸ್ತೆ ಕುಸಿದಿದ್ದು, ಈ ಹಿನ್ನೆಲೆ BBMP ರೋಡ್ ಇನ್ಫ್ರಾಸ್ಟ್ರಕ್ಚರ್ ಚೀಫ್ ಎಂಜಿನಿಯರ್ರಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.