ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ.
ಇದನ್ನೂ ಓದಿ: ದೈನಂದಿನ ರಾಶಿ ಭವಿಷ್ಯ 08/04/2021
ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೂಂದೆಡೆ ನೌಕರರನ್ನು ಮಣಿಸಲು ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಈ ಪೈಕಿ ಬುಧವಾರ ಸಂಜೆ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಸಭೆ ನಡೆಸಿ, ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರರನ್ನು ಕೈಬಿಡಲು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ. ಬಿಎಂಟಿಸಿಯಲ್ಲೂ ಸೇರಿದಂತೆ ಸಾವಿರಾರು ತರಬೇತಿ ನೌಕರರಿದ್ದು, ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ಇದನ್ನೂ ಓದಿ: ಅಪಹರಣ ಮಾಡಿದ್ದ ಕೋಬ್ರಾ ಕಮಾಂಡೋ ರಾಕೇಶ್ವರ್ ಸಿಂಗ್ ಮಾನ್ಹಾಸ್ ಭಾವಚಿತ್ರ ಬಿಡುಗಡೆ ಮಾಡಿದ ಮಾವೋವಾದಿಗಳು..!
ಕರಾವಳಿಗೆ ತಟ್ಟದ ಬಂದ್ ಬಿಸಿ: ಖಾಸಗಿ ಬಸ್ ಗಳೇ ಹೆಚ್ಚಾಗಿ ಓಡಾಡುವ ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ. ಬುಧವಾರ ಹೊರಜಿಲ್ಲೆಗಳಿಗೆ ಹೋಗುವ ಕೆಲ ಪ್ರಯಾಣಿಕರು ಪರದಾಡಿದರೂ, ಖಾಸಗಿ ಬಸ್ ಗಳನ್ನು ಬಳಸಿದ್ದರಿಂದ ದೊಡ್ಡ ಮಟ್ಟದ ತೊಂದರೆ ಸಂಭವಿಸಿಲ್ಲ.