ಬೆಂಗಳೂರು: ಕಾಂಗ್ರೆಸ್ ಕಲಹದಿಂದಾಗಿ MLC ಸಿಎಂ ಇಬ್ರಾಹಿಂ ಅವರು ಪಕ್ಷ ತೊರೆಯುತ್ತಿರುವ ಬಗ್ಗೆ ಬಿಜೆಪಿ ಘಟಕ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯನವರೇ ಈ ಬಾರಿ ಕ್ಷೇತ್ರಾಂತರವೋ? ಪಕ್ಷಾಂತರವೋ? ನಿಮ್ಮ ಜೊತೆಗಿದ್ದವರು ಸಮಾಜವಾದಿ, ಆಮ್ ಆದ್ಮಿ ಜತೆ ಕಾಣಿಸುತ್ತಿದ್ದಾರೆಂದು ಕುಟುಕಿದೆ.
ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಪಕ್ಷಾಂತರವೋ?
ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ.
— BJP Karnataka (@BJP4Karnataka)
ವಲಸೆರಾಮಯ್ಯ.. ಮುಂದೆ ನಿಮ್ಮ ದಾರಿ ಯಾವುದು..? ನಿಮ್ಮ ಆಪ್ತರ ಅನ್ಯ ಪಕ್ಷದ ಭೇಟಿ ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಯುಪಿ ಚುನಾವಣೆ ನಂತರ ಏನು..? ಕರ್ನಾಟಕದಲ್ಲೂ ಇದರ ಪ್ರತಿಫಲ ಕಾಣಬಹುದೇ? ನಮ್ಮ ಸಂಪರ್ಕದಲ್ಲಿ ಕೆಲವರಿದ್ದಾರೆ ಅಂದಾಗಲೇ ಅನುಮಾನ ಇತ್ತು, ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದೀರ..? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಪಕ್ಷಾಂತರವೋ?
ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ.
— BJP Karnataka (@BJP4Karnataka)
ಸಿದ್ದರಾಮಯ್ಯನವ್ರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ? ‘ಸಿದ್ದ’ರಾಮಯ್ಯ ಸುಳ್ಳಿನ ಕೊಡ ತುಂಬಿದ್ಯಾ..? 2023ರಲ್ಲಿ ಸ್ಪಷ್ಟ ಉತ್ತರ ಸಿಗಲಿದೆ!!! ಸಿದ್ದರಾಮಯ್ಯನವರೇ, ಪಲಾಯನಕ್ಕೆ ಸಿದ್ಧವಾಗಿರಿ, ಕಾಂಗ್ರೆಸ್ ಪಕ್ಷಕ್ಕೆ ಬೀಗ ಜಡಿಯುವ ಸಮಯ ದೂರವೇನಿಲ್ಲ ಎಂದು ಬಿಜೆಪಿ ಘಟಕ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ.
ಸುಳ್ಳು ಹೇಳುವುದರಲ್ಲಿ ಸದಾ ‘ಸಿದ್ದ’ರಾಮಯ್ಯ ಆಗಿರುವವರ ಸುಳ್ಳಿನ ಕೊಡ ಇನ್ನೇನು ತುಂಬಲಿದೆ. 2023 ರಲ್ಲಿ ಸ್ಪಷ್ಟ ಉತ್ತರ ಸಿಗಲಿದೆ!!!
ಸಿದ್ದರಾಮಯ್ಯನವರೇ, ಪಲಾಯನಕ್ಕೆ ಸಿದ್ಧವಾಗಿರಿ.#ವಲಸೆರಾಮಯ್ಯ
— BJP Karnataka (@BJP4Karnataka) January 27, 2022
ಇದನ್ನೂ ಓದಿ : ಉಡುಪಿ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರೆಯುತ್ತೆ… ಸಮವಸ್ತ್ರದ ಬಗ್ಗೆ ಸರ್ಕಾರ ಶೀಘ್ರ ನಿರ್ಧಾರ ಮಾಡಲಿದೆ: ಬಿ.ಸಿ. ನಾಗೇಶ್…