ಬೆಂಗಳೂರು : ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರದ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಬಿಜೆಪಿಯಾಗಿದೆ ಎಂದು ತಿಳಿಸಿದೆ.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?— Karnataka Congress (@INCKarnataka) November 28, 2022
ಕಾಂಗ್ರೆಸ್ ಟ್ವೀಟ್ನಲ್ಲಿ ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಬಿಜೆಪಿಯಾಗಿದೆ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ, ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ, ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ , ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?. ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ?, ಬಿಜೆಪಿ ನಡೆಗೆ ಟ್ವೀಟ್ ನಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.
ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?
ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?
— Karnataka Congress (@INCKarnataka) November 28, 2022
ಇದನ್ನೂ ಓದಿ :ಸಂಸದೆ ಸುಮಲತಾರ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ…