ವಿಜಯಪುರ: ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಹೊಲಿಗೆ ಬಿಚ್ಚಿಕೊಂಡು ಬಾಣಂತಿಯರು ನರಳಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಮೇ 17 ರಂದು ಜಿಲ್ಲಾಸ್ಪತ್ರೆಯಲ್ಲಿ 21 ಬಾಣಂತಿಯರ ಸಿಜೇರಿಯನ್ ಹೊಲಿಗೆ ಬಿಚ್ಚಿಕೊಂಡು ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಯು/ಎಸ್, 7(2) ಮತ್ತು 9(3)(ಎ) ರ ಅಡಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್, ಶಸ್ತ್ರ ಚಿಕಿತ್ಸಕ ಡಾ.ಸಂಗಣ್ಣ ಲಕ್ಕಣ್ಣವರ, ರೆಸಿಡೆಂಟ್ ಮೆಡಿಕಲ್ ಆಫೀಸರ್ ಡಾ.ಎ.ಜಿ.ಬಿರಾದಾರ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಲೋಕಾಯುಕ್ತ ಸಂಸ್ಥೆ ಅನುಸರಣಾ ವರದಿ ನೀಡುವಂತೆ ಆದೇಶಿಸಿದೆ.